ಬೆಂಗಳೂರಿನಲ್ಲಿ ಒತ್ತುವರಿ ಮಾಡಿಕೊಂಡಿದ್ದ 60 ಕೋಟಿ ರೂಪಾಯಿ ಮೌಲ್ಯದ 5 ಎಕರೆ ಅರಣ್ಯ ಭೂಮಿಯನ್ನು ತೆರವುಗೊಳಿಸಲಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಅವರು, ಬನಶಂಕರಿ ಬಳಿಯ ಬಿ.ಎಂ. ಕಾವಲ್ ಸರ್ವೇ ನಂಬರ್ 92ರಲ್ಲಿ ಒತ್ತುವರಿಯಾಗಿದ್ದ ಅರಣ್ಯಭೂಮಿಯನ್ನು ತೆರವುಗೊಳಿಸಲಾಗಿದೆ. ನ್ಯಾಯಾಲಯದ ಆದೇಶದ ಮೇರೆಗೆ ಒತ್ತುವರಿ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರದ ಅಧಿಕಾರಕ್ಕೆ ಒಂದು ವರ್ಷ ಪೂರೈಸಿದೆ. ಈ ಅವಧಿಯಲ್ಲಿ ಪಾರದರ್ಶಕ ಮತ್ತು ಜನಪರವಾದ ಆಡಳಿತ ನೀಡಿದ್ದು, ಜನರ ವಿಶ್ವಾಸ ಇಮ್ಮಡಿಯಾಗಿದೆ. ಲೋಕಸಭಾ ಚುನಾವಣೆಯಲ್ಲಿ ಇದು ಪ್ರತಿಫಲಿಸಲಿದ್ದು, ರಾಜ್ಯದ 28ಸ್ಥಾನಗಳ ಪೈಕಿ ಕಾಂಗ್ರೆಸ್ ಪಕ್ಷ ಕನಿಷ್ಠ 20 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಹೇಳಿದರು.
Ещё видео!