ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲೇ ವೈದ್ಯಕೀಯ ವಿದ್ಯಾರ್ಥಿ ಮೇಲೆ ಅತ್ಯಾಚಾರ ಖಂಡಿಸಿ ವೈದ್ಯರಿಂದ ಪ್ರತಿಭಟನೆ.
ಚಿಂತಾಮಣಿ: ಪಶ್ಚಿಮ ಬಂಗಾಳದ ಸರ್ಕಾರಿ ಆರ್.ಜಿ.ಕಾರ್ ವೈದ್ಯಕೀಯ ಕಾಲೇಜಿನಲ್ಲಿ ಆಗಸ್ಟ್ 9 ರಂದು ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ತಾಲ್ಲೂಕಿನ ಎಲ್ಲಾ ವ್ಯೆದ್ಯರಿಂದ ಐ.ಎಂ.ಎ ನೇತೃತ್ವದಲ್ಲಿ ಪ್ರತಿಭಟನಾ ನಿರತ ವೈದ್ಯರು, ದಾದಿಯರು ನಗರದ ಪ್ರವಾಸಿ ಮಂದಿರದಿಂದ ಪ್ರತಿಭಟನಾ ಮೆರವಣಿಗೆಯು ಜೋಡಿ ರಸ್ತೆ, ಪಿಸಿಆರ್ ಕಾಂಪ್ಲೆಕ್ಸ್, ಮತ್ತೆ ಜೋಡಿ ರಸ್ತೆಯ ಮೂಲಕ ವರೆಗೂ ತಾಲ್ಲೂಕು ಕಚೇರಿಗೆ ತಲುಪುತ್ತದೆ. ತಹಶೀಲ್ದಾರ್ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು.
ಈ ವೇಳೆ ಮಾತನಾಡಿದ ಐ.ಎಂ.ಎ ತಾಲ್ಲೂಕು ಅಧ್ಯಕ್ಷರಾದ ಎಸ್ ಡಾ.ಯಸ್ಮಿನ್ ತಾಜ್, ಡಾ.ಎಂ ಪಾಷಾ , ಉಪಾಧ್ಯಕ್ಷರಾದ ಮುನಿ ವೆಂಕಟರೆಡ್ಡಿ , ಕಾರ್ಯದರ್ಶಿ ಡಾ.ಯಶಸ್ವಿನಿ, ಡಾ.ದಾಕ್ಷಾಯಿಣಿ, ಡಾ. ಸಂತೋಷ್,ಡಾ.ಜಯಂತಿ ಮಾತನಾಡಿ ಆಗಸ್ಟ್ 17 ರಂದು ಶನಿವಾರ ಬೆಳಿಗ್ಗೆ 6 ರಿಂದ ಆಗಸ್ಟ್ 18 ರಂದು ಭಾನುವಾರ ಬೆಳಿಗ್ಗೆ 6 ಗಂಟೆಯವರೆಗೆ ನಗರ ಹಾಗೂ ತಾಲ್ಲೂಕಿನ ಎಲ್ಲ ಖಾಸಗಿ ಆಸ್ಪತ್ರೆಗಳನ್ನು ಬಂದ್ ಮಾಡುವು ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲೇ ವೈದ್ಯಕೀಯ ವಿದ್ಯಾರ್ಥಿ ಮೇಲೆ ಅತ್ಯಾಚಾರ ಎಸಗಿ ಕೊಲೆಮಾಡಿರುವುದು ಹೇಯಕೃತ್ಯ. ಜತೆಗೆ ಸಾಕ್ಷ್ಯವನ್ನು ನಾಶಪಡಿಸಲು ಕಿಡಿಗೇಡಿಗಳು ಆಸ್ಪತ್ರೆಯ ಆವರಣಕ್ಕೆ ನುಗ್ಗಿ ಆಸ್ಪತ್ರೆಯ ಕಟ್ಟಡ, ತುರ್ತು ವಿಭಾಗ, ಶುಶ್ರೂಷೆ ಕೇಂದ್ರ, ವೈದ್ಯಕೀಯ ಯಂತ್ರೋಪಕರಣ, ಪೀಠೋಪಕರಣ, ಔಷಧ ಕೇಂದ್ರ ಹೊರರೋಗಿ ವಿಭಾಗ ಹಾಗೂ ಇತರೆ ವೈದ್ಯಕೀಯ ಸಲಕರಣೆಗಳನ್ನು ಧ್ವಂಸಗೊಳಿಸಿದ್ದಾರೆ.
ಸ್ವಾತಂತ್ರ ಬಂದು 78 ವರ್ಷಗಳು ಕಳೆದರು ಮಹಿಳೆಯರಿಗೆ ಯಾವುದೇ ರೀತಿಯಾಗಿ ರಕ್ಷಣೆ ಇಲ್ಲ
ಆಕಸ್ಮಿಕ ಅಥವಾ ಯಾರೋ ಒಬ್ಬರು ಮಾಡಿರುವ ಕೃತ್ಯವಲ್ಲ. ಪೂರ್ವನಿಯೋಜಿತ ಕೃತ್ಯದಂತೆ ಕಾಣುತ್ತಿದೆ. ಆರೋಪಿಗಳನ್ನು ಶೀಘ್ರವಾಗಿ ಬಂಧಿಸಬೇಕು. ಹಿಂಸಾಚಾರ ಹಾಗೂ ದುಷ್ಕೃತ್ಯಗಳನ್ನು ನಡೆಸಿರುವ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿ ತಾಲ್ಲೂಕು ಐ.ಎಂ.ಎ ವತಿಯಿಂದ ಒಂದು ದಿನ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಖಾಸಗಿ ಆಸ್ಪತ್ರೆ, ಆಯುರ್ವೇದ, ದಂತವೈದ್ಯಕೀಯ, ಕ್ಲೀನಿಕ್, ಒಪಿಡಿ ಲ್ಯಾಬ್ ಸೇವೆಗಳನ್ನು ಬಂದ್ ಮಾಡಲಾಗುತ್ತದೆ. ಆದರೆ ಅಪಘಾತ ಅಥವಾ ತುರ್ತು ಚಿಕಿತ್ಸೆ ಸಂದರ್ಭಗಳಿಗಾಗಿ ಕೆಲವು ಆಸ್ಪತ್ರೆಗಳು ತೆರೆದಿರುತ್ತವೆ. ವೈದ್ಯರು ಮತ್ತು ಕ್ಲೀನಿಕ್ ಗಳ ಮೇಲೆ ಹಿಂಸಾಚಾರ ಮತ್ತು ದುಷ್ಕೃತ್ಯಗಳನ್ನು ನಡೆಸುವವರಿಗೆ ಕಠಿಣ ಶಿಕ್ಷೆ ನೀಡುವ ಕಾನೂನು ನಿಯಮಾವಳಿಗಳನ್ನು ಕೇಂದ್ರ ಸರ್ಕಾರ ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ಹೇಳಿದರು.
Ещё видео!